ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ : ಜಮೀನಿನ ದಾರಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನಿನ ದಾರಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಈ ಮಾರಾಮಾರಿ ಓರ್ವ ಯುವಕನ ಜೀವವನ್ನು ಬಲಿತೆಗೆದುಕೊಂಡಿದೆ.

ಮೃತ ದುರ್ದೈವಿಯನ್ನು ಪರಮೇಶ ತಂದೆ ಮಲ್ಲಣ್ಣ ಗಿಂಡಿ (27) ಎಂದು ಗುರುತಿಸಲಾಗಿದೆ. ಕುಟುಂಬಗಳ ನಡುವೆ ಜಮೀನಿನ ದಾರಿ ವಿಚಾರವಾಗಿ ಹಿಂದಿನಿಂದಲೂ ವೈಷಮ್ಯವಿತ್ತು ಎನ್ನಲಾಗಿದೆ.

ಈ ವೈಷಮ್ಯವೇ ಮಾರಾಮಾರಿ ರೂಪ ಪಡೆದು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದು, ಪರಮೇಶ ಸಾವಿಗೆ ಕಾರಣವಾಗಿದೆ. ಘಟನೆಯಲ್ಲಿ ಮೃತ ಪರಮೇಶನ ತಮ್ಮನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By :
PublicNext

PublicNext

31/03/2026 09:48 am

Cinque Terre

10.62 K

Cinque Terre

0

ಸಂಬಂಧಿತ ಸುದ್ದಿ