ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಸಕಾರಾತ್ಮಕ ಶಿವಮೊಗ್ಗ’ವನ್ನು ನಿರ್ಮಿಸಲು ಚನ್ನಬಸಪ್ಪ ಕರೆ

ಶಿವಮೊಗ್ಗ : ನಮ್ಮ ನಗರದ ಸಾಂಸ್ಕೃತಿಕ ವೈಭವ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸುವ ಮೂಲಕ ‘ಸಕಾರಾತ್ಮಕ ಶಿವಮೊಗ್ಗ’ವನ್ನು ನಿರ್ಮಿಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಸಾಮಾಜಿಕ ಜಾಲತಾಣದ ಯುವ ಕ್ರಿಯೇಟರ್‌ಗಳಿಗೆ ಕರೆ ನೀಡಿದರು.

ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶಾಂತಿ ನಗರದ ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆಯ ಕುರಿತ ವಿಶೇಷ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ, ’ಅನವರತ ಫೌಂಡೇಷನ್’ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸಿದ್ದರು.

ಸಭೆಯಲ್ಲಿ ನಗರದ ಸಂಚಾರ ನಿಯಮಗಳ ಜಾಗೃತಿ, ಸೈಬರ್ ಸುರಕ್ಷತೆ ಮತ್ತು ಗಾಂಜಾಗೆ ಸಂಬಂಧಿಸಿದಂತ ವಿಷಯಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕಂಟೆಂಟ್ ಕ್ರಿಯೇಟರ್‌ಗಳು ಕೈಜೋಡಿಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಇನ್‌ಫ್ಲುಯೆನ್ಸರ್‌ಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರಲ್ಲದೆ, ಜಿಲ್ಲಾಡಳಿತದೊಂದಿಗೆ ಸದಾ ಸಹಕರಿಸುವುದಾಗಿ ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

31/03/2026 04:35 pm

Cinque Terre

1.04 K

Cinque Terre

0

ಸಂಬಂಧಿತ ಸುದ್ದಿ