ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು

ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವವರ ಪುತ್ರ ಆರ್ಯನ್ (1 ವರ್ಷ 6 ತಿಂಗಳು) ಮೃತ ಮಗು. ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಮಂಜುನಾಥ್ ಅವರ ಎರಡನೇ ಮಗ ಆರುಷ್ ಖಾಸಗಿ ಶಾಲೆಯೊಂದರಲ್ಲಿ ಎಲ್‌ಕೆಜಿ ಓದುತ್ತಿದ್ದು, ಮಧ್ಯಾಹ್ನ ಶಾಲಾ ಬಸ್‌ನಲ್ಲಿ ಮನೆಗೆ ಮರಳಿದ್ದನು.

ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್ಸಿನ ಬಳಿ ಹೋಗಿದ್ದರು. ಈ ವೇಳೆ ಅವರ ಹಿಂದೆಯೇ ಮಗು ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸಿಕೊಳ್ಳುತ್ತಿದ್ದ ಸಂದರ್ಭ, ಮಗು ಆರ್ಯನ್ ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದನು. ಇದನ್ನು ಗಮನಿಸದ ಬಸ್ ಚಾಲಕ ಉಮೇಶ್, ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿದ ಪರಿಣಾಮ ಮಗುವಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಅಪಘಾತದಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಗಾಯವಾಗಿತ್ತು. ಕೂಡಲೇ ಮಗುವನ್ನು ಅದೇ ಶಾಲಾ ಬಸ್‌ನಲ್ಲಿ ಸರ್ಜಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಸಂಬಂಧ ಮಗುವಿನ ತಂದೆ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

31/03/2026 10:17 pm

Cinque Terre

10.28 K

Cinque Terre

0

ಸಂಬಂಧಿತ ಸುದ್ದಿ