ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಅನಧಿಕೃತ 425 ಚೀಲ ಯೂರಿಯಾ ರಸಗೊಬ್ಬರ ಸೀಜ್

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಉಡುಗಣಿ ಗ್ರಾಮದಲ್ಲಿ ಬಯಲಿನಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ 425 ಚೀಲ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಕೃಷಿ ಇಲಾಖೆಯ ಕೇಂದ್ರ ಕಚೇರಿಗೆ ಬಂದ ದೂರಿನ ಮೇರೆಗೆ ಮೇಲಧಿಕಾರಿಗಳ ಸೂಚನೆಯಂತೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಉಡುಗಣಿ ಗ್ರಾಮದ ಸರ್ವೆ ನಂ. 74/2ರಲ್ಲಿ ಪೂರ್ವ ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಸಂಬಂಧಿಸಿದ ಜಮೀನಿನ ರೈತರನ್ನು ವಿಚಾರಿಸಿದಾಗ, ಯಾವುದೇ ಕೃಷಿ ಚಟುವಟಿಕೆ ಕೈಗೊಂಡಿಲ್ಲ ಹಾಗೂ ರಸಗೊಬ್ಬರ ದಾಸ್ತಾನು ಬಗ್ಗೆ ಮಾಹಿತಿ ಇಲ್ಲವೆಂದು ತಿಳಿಸಿದ್ದಾರೆ. ಕೂಲಂಕಷವಾಗಿ ಪರಿಶೀಲಿಸಿದಾಗ ತಲಾ 45 ಕೆ.ಜಿ ತೂಕದ 425 ಯೂರಿಯಾ ಚೀಲಗಳು ಪತ್ತೆಯಾಗಿವೆ.

ರಸಗೊಬ್ಬರ ನಿಯಂತ್ರಣ ಕಾಯ್ದೆ ಆದೇಶ ಹಾಗೂ ಅಗತ್ಯ ವಸ್ತುಗಳ ಕಾಯ್ದೆ ಅನ್ವಯ ಯೂರಿಯಾ ರಸಗೊಬ್ಬರವನ್ನು ಅಧಿಕೃತ ಮಾರಾಟಗಾರರ ಗೋದಾಮುಗಳಲ್ಲಿ ಮಾತ್ರ ಸಂಗ್ರಹಿಸಬೇಕು. ಖರೀದಿ ಬಿಲ್ ಹಾಗೂ ಬೆಳೆ ಬೆಳೆಯುತ್ತಿರುವ ಜಮೀನಿನ ಮಾಹಿತಿ ಇರಬೇಕು. ಆದರೆ ನಿಯಮ ಉಲ್ಲಂಘಿಸಿರುವುದರಿಂದ ಮುಟ್ಟುಗೋಲು ಹಾಕಲಾಗಿದೆ. ವಶಪಡಿಸಿಕೊಂಡ ಯೂರಿಯಾವನ್ನು ಶಿರಾಳಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುಪರ್ದಿಗೆ ನೀಡಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

01/04/2026 03:47 pm

Cinque Terre

4.08 K

Cinque Terre

0

ಸಂಬಂಧಿತ ಸುದ್ದಿ