ಹಾವೇರಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.
ಸವಣೂರು ಪಟ್ಟಣದ ಹಜರತ್ ಅಲಿ (2 ವರ್ಷ) ಮೃತಪಟ್ಟ ದುರ್ದೈವಿ. ಇಂದು ಬೆಳಿಗ್ಗೆ ಹಾವೇರಿ ಕೇಂದ್ರ ಬಸ್ ನಿಲ್ದಾಣದ ಪ್ಲಾಟ್ಫಾರ್ಮ್ ಮೇಲೆ ಸಾರಿಗೆ ಬಸ್ ಏಕಾಏಕಿ ನುಗ್ಗಿದ್ದರಿಂದ ಈ ಅಪಘಾತ ಸಂಭವಿಸಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಈ ದುರ್ಘಟನೆಯಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದರು. ಮಗು ಸಾವನ್ನಪ್ಪಿದ್ದು, ವಾಸುದೇವ (44), ಹರ್ಷಾ (6),
ಕಾವ್ಯಾಂಜಲಿ (39) ಗಾಯಗೊಂಡಿದ್ದು,
ಪ್ರಸ್ತುತ ಇವರೆಲ್ಲರಿಗೂ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಬಸ್ ನಿಲ್ದಾಣದ ಪ್ಲಾಟ್ಫಾರ್ಮ್ ಮೇಲಿದ್ದ ಪ್ರಯಾಣಿಕರ ಮೇಲೆ ಬಸ್ ನುಗ್ಗಿದ ಈ ಘಟನೆಯಿಂದಾಗಿ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
PublicNext
01/04/2026 04:34 pm
LOADING...