ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ 2026ರ ಏಪ್ರಿಲ್ ತಿಂಗಳ ಅಕ್ಕಿ ವಿತರಣೆಯ ವಿವರಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಬಿಡುಗಡೆ ಮಾಡಿದ್ದಾರೆ.
ಈ ಪ್ರಕಟಣೆಯ ಪ್ರಕಾರ ಅಂತ್ಯೋದಯ ಕಾರ್ಡ್ದಾರರಿಗೆ ಎನ್ಎಫ್ಎಸ್ಎ ಯೋಜನೆಯಡಿ ಪ್ರತಿ ಕಾರ್ಡ್ಗೆ 35 ಕೆಜಿ ಅಕ್ಕಿ ಸಿಗಲಿದ್ದು, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬದ ಪ್ರತಿ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಅದೇ ರೀತಿ ಆದ್ಯತಾ ಅಥವಾ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯರಿಗೆ ಎನ್ಎಫ್ಎಸ್ಎ ಮತ್ತು ಅನ್ನಭಾಗ್ಯ ಯೋಜನೆಯಡಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.
Kshetra Samachara
03/04/2026 09:27 am
LOADING...