ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲವ್ ಜಿಹಾದ್ ಪ್ರಕರಣ : ಸಮೀರ್ ಮುಲ್ಲಾಗೆ ತಕ್ಕ ಶಿಕ್ಷೆಯಾಗಬೇಕು - ಶಾಸಕ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿಯ ಲವ್ ಜಿಹಾದ್ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು‌ ಮಾಡಿದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಪ್ರೀತಿ‌ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆ. ಆ ಯುವತಿಗೆ ಅನ್ಯಾಯವಾಗಿದೆ, ಲವ್ ಜಿಹಾದ್ ಪ್ರಕರಣದಲ್ಲಿರುವ ಸಮೀರ್ ಮುಲ್ಲಾಗೆ ಕಠಿಣ ಶಿಕ್ಷೆ ನೀಡಬೇಕು ಪೊಲೀಸರು ಈ ಬಗ್ಗೆ ಕೂಲಂಕುಷವಾಗಿ ತನಿಖೆ ಮಾಡಿ, ಅವನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಶಾಸಕ‌ ಮಹೇಶ ಟೆಂಗಿನಕಾಯಿ ಪಬ್ಲಿಕ್ ನೆಕ್ಸ್ಟ್ ಪ್ರತಿನಿಧಿ ಈರಣ್ಣ ವಾಲಿಕಾರ ಜೊತೆ ಮಾತನಾಡಿದ್ದಾರೆ.

ಲವ್ ಜಿಹಾದ್ ಅಂತಹ ಪ್ರಕರಣಗಳು ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಜಿಮ್ ಹೆಸರಲ್ಲಿ ಲವ್ ಜಿಹಾದ್ ಆಗುತ್ತಿವೆ, ಈ ಬಗ್ಗೆ ಪೊಲೀಸ್ ಕಮಿಷನರ್ ತನಿಖೆ ಮಾಡಿ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/04/2026 04:21 pm

Cinque Terre

73.36 K

Cinque Terre

8

ಸಂಬಂಧಿತ ಸುದ್ದಿ