ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಷೇತ್ರ ಮರುಸ್ಥಾಪನೆ ಹೋರಾಟಕ್ಕೆ ಬಿಜೆಪಿ ಬೆಂಬಲ ಇದೆ : ಹರತಾಳು ಹಾಲಪ್ಪ

ಶಿವಮೊಗ್ಗ : ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.

ಹೊಸನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೌಗೋಳಿಕವಾಗಿ ವಿಸ್ತಾರವಾಗಿದ್ದರೂ ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ಹೊಸನಗರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತ್ತು. ಅಂದು ಕುಲದೀಪ್ ಸಿಂಗ್ ಆಯೋಗದ ಎದುರು ನಮ್ಮ ಅಹವಾಲು ಸಲ್ಲಿಸಿದರೂ ಉಪಯೋಗ ಆಗಿರಲಿಲ್ಲ. ಅಂದು ನಡೆದ ಕ್ಷೇತ್ರ ಮರುವಿಂಗಡಣೆ ಅವೈಜ್ಞಾನಿಕವಾಗಿತ್ತು. ಇದಕ್ಕೆ ತಾವೂ ಸೇರಿದಂತೆ ತಾಲೂಕಿನ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು ಎಂದರು.

Edited By : PublicNext Desk
Kshetra Samachara

Kshetra Samachara

04/04/2026 10:51 am

Cinque Terre

300

Cinque Terre

0

ಸಂಬಂಧಿತ ಸುದ್ದಿ