ಹಾವೇರಿ ವಿಶ್ವವಿದ್ಯಾಲಯ ತನ್ನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇದೇ ಜೂನ್ 6 ರಂದು ಘಟಿಕೋತ್ಸವ ಆಯೋಜಿಸಿದ್ದು, ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ. ಈ ಐತಿಹಾಸಿಕ ಘಟನೆಗೆ ವಿಶ್ವವಿದ್ಯಾಲಯ ಸಿದ್ಧವಾಗಿದ್ದು, ಶೈಕ್ಷಣಿಕ ಲೋಕದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ.
ಈ ಐತಿಹಾಸಿಕ ಘಟಿಕೋತ್ಸವದಲ್ಲಿ ಹಾವೇರಿ ಹುಕ್ಕೇರಿಮಠದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು, ನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರು ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಅವರ ಸಮಾಜ ಸೇವೆ, ರಾಜಕೀಯ ಕೊಡುಗೆ ಮತ್ತು ಸಾಹಿತ್ಯಿಕ ಸಾಧನೆಗಳನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗುತ್ತಿದೆ.
ಜೂನ್ 6 ರಂದು ಹಾವೇರಿಯ ಜೆ.ಹೆಚ್. ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಈ ಘಟಿಕೋತ್ಸವದಲ್ಲಿ, ರಾಜ್ಯಪಾಲರಾದ ಘನವೆತ್ತ ಥಾವರಚಂದ್ ಗೆಹಲೋತ್ ಅವರು ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ. ಈ ಮೂಲಕ ಹಾವೇರಿ ವಿಶ್ವವಿದ್ಯಾಲಯ ತನ್ನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಲಿದೆ.
Kshetra Samachara
04/04/2026 09:46 pm