ಬೆಂಗಳೂರು : ಉಪಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಸದಾಶಿವನಗರದಲ್ಲಿ ಹೇಳಿದರು.
ನಮ್ಮ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಹಾಗೂ ಆ ಭಾಗದ ಅಭಿವೃದ್ಧಿ ವಿಚಾರದಲ್ಲಿ ತೋರಿದ ಸ್ಪಂದನೆಗೆ ಮತದಾರರು ಬೆಂಬಲ ನೀಡಲಿದ್ದಾರೆ. ಹೀಗಾಗಿ, ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಕೇಳಿದ ಪ್ರಶ್ನೆಗೆ, "ಉಪಚುನಾವಣೆ ಮುಗಿದ ನಂತರ ಈ ಬಗ್ಗೆ ಮಾತನಾಡೋಣ. ಸದ್ಯಕ್ಕೆ ನನಗೆ ತಮಿಳುನಾಡು ಚುನಾವಣೆ ಜವಾಬ್ದಾರಿ ನೀಡಲಾಗಿದೆ ಎಂದರು.
PublicNext
07/04/2026 04:15 pm
LOADING...