ಧಾರವಾಡ: ಆರ್ಎಸ್ಎಸ್ ಹಾಗೂ ಬಿಜೆಪಿಯನ್ನು ವಿಷಸರ್ಪಕ್ಕೆ ಹೋಲಿಕೆ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡನೀಯ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್.ಎಸ್.ಎಸ್- ಬಿಜೆಪಿಯವರು ಬಂದಾಗ ನಮಾಜ್ ಮಾಡುವುದನ್ನು ಅರ್ಧಕ್ಕೆ ನಿಲ್ಲಿಸಿಯಾದರೂ ಅವರನ್ನು ಹೊಡೆಯಿರಿ ಎಂದು ಹೇಳಿಕೆ ನೀಡುವ ಮೂಲಕ ಮುಸಲ್ಮಾನರನ್ನು ಪ್ರಚೋದಿಸಿದ್ದಾರೆ. ಮಹಾಭಾರತದ ಶಕುನಿ ಕೌರವ ಕುಲವನ್ನೇ ನಾಶ ಮಾಡಿದಂತೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಾಶ ಮಾಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
07/04/2026 09:38 pm
LOADING...