ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಧ್ವಜಾರೋಹಣ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀದೇವರ ಧ್ವಜಾರೋಹಣ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ರಾತ್ರಿ ಉತ್ಸವ ಬಲಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಅರ್ಚಕ ವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
14/04/2026 02:11 pm
LOADING...