ಭಟ್ಕಳ: ಕರಾವಳಿ ಭಾಗ ಸೇರಿದಂತೆ ತಾಲೂಕಿನಲ್ಲಿ ದಿನೇದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಮನುಷ್ಯರ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ತತ್ತರಿಸುತ್ತಿವೆ.
ಈ ಹಿನ್ನೆಲೆ, ನೀರಿಗಾಗಿ ಹಾತೊರೆಯುತ್ತಿರುವ ಪಕ್ಷಿಗಳು ಹಾಗೂ ಮೂಕ ಪ್ರಾಣಿಗಳಿಗೆ ನೆರವಾಗುವಂತೆ ಸಾರ್ವಜನಿಕರಿಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ಬೀನಾ ಮಂಕಾಳ ವೈದ್ಯ ಮನವಿ ಮಾಡಿದ್ದಾರೆ.
ಮನೆಯ ಮುಂದೆ, ಬಾಲ್ಕನಿ ಹಾಗೂ ರಸ್ತೆ ಬದಿಗಳಲ್ಲಿ ನೀರಿನ ಪಾತ್ರೆಗಳನ್ನು ಇಡುವ ಮೂಲಕ ಪ್ರಾಣಿ-ಪಕ್ಷಿಗಳ ದಾಹ ನೀಗಿಸಬಹುದಾಗಿದೆ. ಸಣ್ಣ ಪ್ರಯತ್ನವೂ ಜೀವ ಉಳಿಸುವ ಮಹತ್ವದ ಕಾರ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಲಿನಲ್ಲಿ ಅಲೆಯುವ ಮೂಕ ಪ್ರಾಣಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನುಷ್ಯರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬಲ್ಲರು, ಆದರೆ ಈ ಜೀವಿಗಳು ಅನುಭವಿಸುವ ಬಾಯಾರಿಕೆ ಮತ್ತು ಬಿಸಿಲಿನ ತೀವ್ರತೆಯನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ತಾಲೂಕಿನ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಭಾಗವಹಿಸಿ ಪ್ರಾಣಿ ಸಂಕುಲದ ರಕ್ಷಣೆಗೆ ಕೈಜೋಡಿಸಬೇಕೆಂದು ಕೋರಲಾಗಿದೆ.
Kshetra Samachara
16/04/2026 08:49 pm
LOADING...