ಸಿದ್ದಾಪುರ: ತಾಲೂಕಿನ ಬಿಕ್ಕಳಸೆಯಲ್ಲಿ ನಡೆದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರ ಬಳಿ ಸಂಪೂರ್ಣ ಮಾಹಿತಿ ಇದ್ದರೂ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂದು ಸಿದ್ದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಎಂ.ಕೆ. ತಿಮ್ಮಪ್ಪ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಸಿದ್ದಾಪುರ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಶಾಸಕರ ಕೈವಾಡದ ಅನುಮಾನ, ಲವ್ ಜಿಹಾದ್ ಆರೋಪ
"ಇಷ್ಟೆಲ್ಲ ದಾಖಲೆಗಳಿದ್ದರೂ ಉರ್ವ ಸಿಪಿಐ ತನಿಖೆಗೆ ಮುಂದಾಗುತ್ತಿಲ್ಲ ಎಂದರೆ, ಈ ಲವ್ ಜಿಹಾದ್ ಪ್ರಕರಣಕ್ಕೆ ಸ್ಥಳೀಯ ಶಾಸಕರ ಕೈವಾಡವಿದೆ ಎನ್ನುವ ಅನುಮಾನ ನಮಗೆ ಬಲವಾಗಿ ವ್ಯಕ್ತವಾಗುತ್ತಿದೆ" ಎಂದು ತಿಮ್ಮಪ್ಪ ಹೇಳಿದರು. ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸದಿದ್ದರೆ, ಸಿದ್ದಾಪುರ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಅವರು ತೀವ್ರ ಎಚ್ಚರಿಕೆ ನೀಡಿದರು.
ಸೋಮವಾರ ಪ್ರತಿಭಟನೆಗೆ ನಿರ್ಧಾರ
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದ ಬಿಜೆಪಿ, ಸೋಮವಾರ ಸಿದ್ದಾಪುರ ಠಾಣೆ ಎದುರು ಬೃಹತ್ ಧರಣಿ ನಡೆಸಲು ನಿರ್ಧರಿಸಿದೆ. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ತೋಟಪ್ಪ ನಾಯ್ಕ್, ಎಸ್.ಕೆ. ಮೆಸ್ತ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ನಂದನ್ ಬೋರ್ಕರ್ ಸೇರಿದಂತೆ ಪ್ರಮುಖರಾದ ಸುರೇಶ್ ನಾಯ್ಕ್, ಮಂಜುನಾಥ್ ಭಟ್, ಕೃಷ್ಣಮೂರ್ತಿ ಐಸೂರು, ವೆಂಕಟೇಶ್, ಶ್ರೀನಿವಾಸ್, ಶ್ರೀಧರ್ ನಾಯ್ಕ್ ಹಾಗೂ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Kshetra Samachara
18/04/2026 08:02 pm
LOADING...