ರಾಮ ನಗರ- ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಗೌರಮ್ಮಕೆರೆ ಮುಖ್ಯರಸ್ತೆಯ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿದೆ.
ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆಗೆ ಕೊಳಚೆ ನೀರು ತುಂಬಿದ್ದು ಇದರಿಂದಾಗಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Kshetra Samachara
19/04/2026 10:17 am