ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ NMD ಜಮೀರ್ ಅಹ್ಮದ್ ದರ್ಗಾವಾಲೆ ಎಂಬಾತನನ್ನು ಯಾರೋ ದುಷ್ಕರ್ಮಿಗಳು ಕೊಚ್ಚಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಂಡಗೋಡ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೋಟೆಲ್ ನಲ್ಲಿ ನಡೆದಿದೆ.
ಹೌದು.. ಮುಂಡಗೋಡ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೋಟೆಲ್ನಲ್ಲಿ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಯಾರೋ ದುಷ್ಕರ್ಮಿಗಳ ತಂಡ ಹೋಟೆಲ್ ನಲ್ಲಿ ಕುಳಿತಿದ್ದ ಜಮೀರ್ ಗೆ ಮೊದಲು ಗುಂಡು ಹಾರಿಸಿ, ನಂತರ ಕುತ್ತಿಗೆ ಸೀಳಿ ಭೀಕರವಾಗಿ ಹತ್ಯೆ ಮಾಡಿ ಪರಾರಿ ಆಗಿದ್ದಾರೆ, ಅನ್ನೋ ಅನುಮಾನ ವ್ಯಕ್ತವಾಗಿದೆ. ಇನ್ನೂ ಈ ಘಟನೆಯ ಮಾಹಿತಿ ತಿಳಿದ ತಕ್ಷಣ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹತ್ಯೆಯ ಹಿನ್ನೆಲೆ ಕುರಿತುತನಿಖೆ ಮುಂದುವರೆಸಿದ್ದಾರೆ.
ಲೋಕೇಶ್ ಸುಣಗಾರ್ ಪಬ್ಲಿಕ್ ನೆಕ್ಸ್ಟ್
PublicNext
25/04/2026 11:53 am
LOADING...