ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆಯ ಆರ್ಭಟಕ್ಕೆ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.
ಜಿಲ್ಲಾಸ್ಪತ್ರೆಯ ಸಮೀಪವಿರುವ ಆಫೀಸರ್ಸ್ ಕ್ಲಬ್ ಆವರಣದಲ್ಲಿರುವ ಕ್ಯಾಂಟೀನ್ಗೆ ಮಳೆ ನೀರು ನುಗ್ಗಿ ಅಡುಗೆ ಮನೆಯೊಳಗೆ ಸುಮಾರು ಮೂರು ಅಡಿಗಳಿಗೂ ಹೆಚ್ಚು ಎತ್ತರದಲ್ಲಿ ನೀರು ನಿಂತಿತ್ತು. ಇದರಿಂದಾಗಿ ಕ್ಯಾಂಟೀನ್ನಲ್ಲಿದ್ದ ವಸ್ತುಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ವ್ಯಾಪಾರ ವಹಿವಾಟಿಗೆ ಭಾರೀ ಅಡಚಣೆ ಉಂಟಾಗಿತ್ತು. ನಗರದ ತಗ್ಗು ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಈ ರೀತಿ ಅವಾಂತರ ಸೃಷ್ಟಿಯಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
PublicNext
28/04/2026 09:35 am
LOADING...