ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಸತತ ಮೂರು ಬಾರಿಗೆ ಸಾಧಕರನ್ನು ಗುರುತಿಸಿ ಸತ್ಕರಿಸುತ್ತಾ ಬಂದಿದೆ; COO ರಾಘವೇಂದ್ರ ರಾವ್

ಹುಬ್ಬಳ್ಳಿ: ಡಿಜಿಟಲ್ ಮಾಧ್ಯಮ ಲೋಕದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಪಬ್ಲಿಕ್ ನೆಕ್ಸ್ಟ್ ಸಂಸ್ಥೆಯು ಸುದ್ದಿ ನೀಡುವುದರ ಜೊತೆಗೆ ಸತತವಾಗಿ ಮೂರನೇ ಬಾರಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಾ ಬಂದಿದೆ ಎಂದು ಪಬ್ಲಿಕ್ ನೆಕ್ಸ್ಟ್ COO ರಾಘವೇಂದ್ರ ರಾವ್ ಅವರು ಹೇಳಿದರು.

ಹುಬ್ಬಳ್ಳಿಯ ನವೀನ ಹೊಟೇಲ್‌ ನಲ್ಲಿ ಪಬ್ಲಿಕ್ ನೆಕ್ಸ್ಟ್ ರತ್ನ ಪ್ರಶಸ್ತಿ-2026 ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಸಾಧಕರಿಗೆ ಅವಾರ್ಡ್ ನೀಡುತ್ತ ಬಂದಿದೆ.

ನಮ್ಮ ಪ್ರತಿಯೊಂದು ಕಾರ್ಯಕ್ರಮಕ್ಕೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸುತ್ತಾರೆ. ಅವರಿಗೆ ಅಭಿನಂದನೆ, ಹಾಗೆಯೇ ಶಾಸಕ ಮಹೇಶ್ ಟೆಂಗಿನಕಾಯಿ, ಮತ್ತು ಸ್ವರ್ಣ ಗ್ರೂಪ್ ಆಪ್ ಕಂಪನಿ ಮಾಲೀಕರಾದ ಡಾ‌. ವಿಎಸ್‌ವಿ ಪ್ರಸಾದ್ ಸೇರಿದಂತೆ ಗಣ್ಯರಿಗೆ, ಸಾಧಕರಿಗೆ ಅಭಿನಂದನೆ ಸಲ್ಲಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/04/2026 08:25 pm

Cinque Terre

22.81 K

Cinque Terre

0

ಸಂಬಂಧಿತ ಸುದ್ದಿ