ಹುಬ್ಬಳ್ಳಿ : ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಕಾಂಗ್ರೆಸ್ ಮೈತ್ರಿಕೂಟದ ವಿರುದ್ಧ ಬಿಜೆಪಿ ವತಿಯಿಂದ ಜನಾಕ್ರೋಶ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಯನ್ನು ಹುಬ್ಬಳ್ಳಿ ನಗರದ ಇಲ್ಲಿನ ನೆಹರು ಮೈದಾನದಲ್ಲಿ ಮೇ.1 ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಸಿ.ಸಿ. ಪಾಟೀಲ ಸೇರಿದಂತೆ ಬಿಜೆಪಿ ಹಲವು ಮುಖಂಡರು, ಕಾರ್ಯಕರ್ತರು, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
Kshetra Samachara
30/04/2026 01:07 pm
LOADING...