ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಣಕಲ್‌ನಲ್ಲಿ ಮಳೆ ಅಬ್ಬರ, ರೈತರ ಬದುಕು ತಲ್ಲಣ: ಮನೆಗಳಿಗೆ ಅಪಾರ ಹಾನಿ!

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಗಾಣಕಲ್ ಗ್ರಾಮದಲ್ಲಿ ಜೋರು ಮಳೆಗೆ ರೈತರ ಬೆಳೆಗಳು ನಾಶವಾಗಿವೆ. ಬಾಳೆ ಹಾಗೂ ತೆಂಗಿನಮರಗಳು ನೆಲಕ್ಕುರುಳಿವೆ. ಇದರ ಜೊತೆಗೆ ಮನೆಗಳ ಮೇಲೆ ಮರಬಿದ್ದಿದ್ದು, ರೈತರಿಗೆ ಅಪಾರ ನಷ್ಟವಾಗಿದೆ. ಜೊತೆಗೆ ಗ್ರಾಮದಲ್ಲಿ ಕೆಲ ವಿದ್ಯುತ್ ಕಂಬಗಳು ಸಹ ಜಖಂ ಆಗಿವೆ. ಇನ್ನು ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಪರಿಹಾರ ಕೊಡಬೇಕೆಂದು ನೊಂದವರು ಮನವಿ ಮಾಡಿದ್ದಾರೆ. ಜೊತೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಾಣಕಲ್ ನಟರಾಜ್ ಸಹ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

Edited By :
Kshetra Samachara

Kshetra Samachara

30/04/2026 10:20 pm

Cinque Terre

1.38 K

Cinque Terre

0