ಮಡಿಕೇರಿ: ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪೊನ್ನಣ್ಣ ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಿಂಪಿಯನ್ ಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂಗಳನ್ನು ಒದಗಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಕ್ರೀಡಾ ಸಚಿವರಾದ ಡಾ ಮನ್ಸುಖ್ ಮಾಂಡವೀಯರವರಿಗೆ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯನವರು ಲಿಖಿತ ಮನವಿಯನ್ನು ನೀಡಿದರು.
PublicNext
03/05/2026 07:27 am
LOADING...