ತಮಿಳುನಾಡಿನಲ್ಲಿ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಥವಾ 'ವಿಜಯ'ದ ಆಶಯದೊಂದಿಗೆ, ಹಲವು ಮಹತ್ವದ ಜನಪರ ಭರವಸೆಗಳನ್ನು ಪ್ರಕಟಿಸಲಾಗಿದೆ. ಸಮಾಜದ ಬಹುತೇಕ ಎಲ್ಲ ವರ್ಗಗಳನ್ನೂ ತಲುಪುವ ಸಮಗ್ರ ಭರವಸೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.ಈ ಭರವಸೆಗಳು ಆರ್ಥಿಕ ನೆರವು, ಸೌಲಭ್ಯಗಳು ಮತ್ತು ಸಾಮಾಜಿಕ ಭದ್ರತೆಯನ್ನು ಒಳಗೊಂಡಿವೆ.
ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಅವರಿಗೆ ಮಾಸಿಕ 2,500 ರೂ. ಸಹಾಯಧನ ನೀಡುವ ಭರವಸೆ ನೀಡಲಾಗಿದೆ. ಇದರ ಜೊತೆಗೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುವುದು. ಕುಟುಂಬದ ಸಹೋದರಿ ಅಥವಾ ಮಗಳ ಮದುವೆಗಾಗಿ 8 ಗ್ರಾಂ ಚಿನ್ನವನ್ನು ನೀಡುವ ಯೋಜನೆಯನ್ನೂ ಘೋಷಿಸಲಾಗಿದೆ.
ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡುವ ಮೂಲಕ ಕೃಷಿ ಕ್ಷೇತ್ರದ ನೆರವಿಗೆ ಧಾವಿಸಲಾಗಿದೆ. ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ಮಾಸಿಕ 3,000 ರೂ. ಭತ್ಯೆ ನೀಡಿ, ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಭರವಸೆ ನೀಡಲಾಗಿದೆ.
ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಕೊಳವೆ ನೀರು ಸರಬರಾಜು ಮಾಡುವ ಭರವಸೆ ನೀಡಲಾಗಿದೆ. ಇದಲ್ಲದೆ, ಪ್ರತಿ ವರ್ಷ ಆರು ಉಚಿತ ಎಲ್ಪಿಜಿ ಸಿಲಿಂಡರ್ಗಳನ್ನು ಒದಗಿಸಲಾಗುವುದು. ಯುವಜನತೆಗೆ ಆರ್ಥಿಕ ಬೆಂಬಲ ನೀಡಲು, ಪದವೀಧರರಿಗೆ 4,000 ರೂ. ಮತ್ತು ಡಿಪ್ಲೊಮಾ ಪಡೆದವರಿಗೆ 2,500 ರೂ. ಮಾಸಿಕ ಭತ್ಯೆಯನ್ನು ಘೋಷಿಸಲಾಗಿದೆ.
ಮಹಿಳೆಯರಿಗೆ ತಿಂಗಳಿಗೆ 2,500 ರೂ. ಸಹಾಯಧನ
ಸಣ್ಣ ರೈತರ ಬೆಳೆ ಸಾಲ ಮನ್ನಾ
ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ಮಾಸಿಕ 3,000 ರೂ. ಭತ್ಯೆ
ಸಹೋದರಿ, ಮಗಳ ಮದುವೆಗೆ 8 ಗ್ರಾಂ ಚಿನ್ನ
200 ಯೂನಿಟ್ ಉಚಿತ ವಿದ್ಯುತ್, ಕೊಳವೆ ನೀರು ಸರಬರಾಜು.
ಪ್ರತಿ ವರ್ಷ ಆರು ಉಚಿತ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವ ಭರವಸೆ
ಮಹಿಳಾ ಸ್ವಸಹಾಯ ಗುಂಪುಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಬಡ್ಡಿರಹಿತ ಸಾಲ.
ಪದವೀಧರರಿಗೆ 4,000 ಭತ್ಯೆ, ಡಿಪ್ಲೊಮಾ ಪಡೆದವರಿಗೆ 2,500 ರೂ.
PublicNext
04/05/2026 02:25 pm