ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಂದೆಗಾಗಿ ಮಠಾಧೀಶರ ಆಶೀರ್ವಾದ ಕೋರಿದ ವಿಜಯೇಂದ್ರ!

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ನವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲು ಬಿಜೆಪಿ ರಾಜ್ಯಾಧ್ಯಕ್ಷ ಹಲವು ಮಠಾಧೀಶರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಕೋಟೆನಾಡಲ್ಲಿ ಇದೇ ತಿಂಗಳ 9ರಂದು ಬಿಎಸ್ವೈರವರ ಅಭಿಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕಾಗಿ ಬಿಎಸ್‌ವೈ ಪುತ್ರ ಬಿ. ವೈ ವಿಜಯೇಂದ್ರ ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸೇವಾಲಾಲ್ ಮಠ ಸೇರಿ ಹಲವು ಮಠಗಳಿಗೆ ಭೇಟಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಾದಾರ ಚನ್ನಯ್ಯ ಶ್ರೀಗಳನ್ನು, ಸರ್ದಾರ್ ಸೇವಾಲಾಲ್ ಸ್ವಾಮಿಗಳನ್ನು ಆಹ್ವಾನಿಸಿದ್ರು. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ.

Edited By :
PublicNext

PublicNext

05/05/2026 07:42 am

Cinque Terre

10.99 K

Cinque Terre

0

ಸಂಬಂಧಿತ ಸುದ್ದಿ