ಚಿತ್ರದುರ್ಗ: ಜಿಲ್ಲೆಯಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಮಹತ್ವದ ಸಭೆ ಕರೆದಿದ್ದಾರೆ.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ, ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಲಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಅರಿತು, ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ನೀರಿನ ಸಮಸ್ಯೆ ಬಗೆಹರಿಸುವಂತೆ ಸಂಸದರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಿದ್ದಾರೆ.
PublicNext
05/05/2026 09:19 am
LOADING...