ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡಿ, ಗೋಹತ್ಯೆ ನಿಲ್ಲಿಸಿ : ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿ

ಲಕ್ನೋ: ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಹಾಗೂ ಹಿರಿಯ ಮುಸ್ಲಿಂ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಕೇಂದ್ರ ಸರ್ಕಾರವು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ ಮಾಡಿದ್ದಾರೆ.

ಮಾಧ್ಯಮವೊಂದರೊಂದಿಗೆ ಮಾತನಾಡಿದ ಅವರು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ ಮಾಡಿದರು. ಅಲ್ಲದೆ, ಗೋಹತ್ಯೆಯ ವಿಚಾರವನ್ನೇ ಮುಂದಿಟ್ಟುಕೊಂಡು ಕೋಮುಗಲಭೆ ಸೃಷ್ಟಿಯಾಗುತ್ತಿರುವುದರಿಂದ ಮುಸ್ಲಿಮರು ಗೋವುಗಳನ್ನು ಗೌರವಿಸಬೇಕು ಮತ್ತು ಗೋಹತ್ಯೆಯನ್ನು ನಿಲ್ಲಿಸಬೇಕು ಎಂದು ಸ್ಪಷ್ಟ ಕರೆ ನೀಡಿದರು.

ಗೋಹತ್ಯೆ ವಿಚಾರವನ್ನು ಮುಂದಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸುವ ಹಾಗೂ ಸಮುದಾಯಗಳನ್ನು ಕೆಣಕುವ ಕೆಲಸಗಳು ನಡೆಯುತ್ತಿರುವುದು ತಮಗೆ ಅಸಮಾಧಾನ ತಂದಿದೆ ಎಂದು ಅನ್ಸಾರಿ ಹೇಳಿದರು. ಈ ಹಿನ್ನೆಲೆಯಲ್ಲಿ ಮುಸ್ಲಿಮರು ಗೋವುಗಳನ್ನು ಗೌರವಿಸಬೇಕು ಮತ್ತು ಅವುಗಳ ಹತ್ಯೆಯನ್ನು ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಒತ್ತಿ ಹೇಳಿದ ಅನ್ಸಾರಿ, ಬಹುಸಂಖ್ಯಾತ ಸಮುದಾಯಗಳ ಭಾವನೆಗಳನ್ನು ಗೌರವಿಸುವುದು ಅತಿ ಮುಖ್ಯ ಎಂದರು. "ನಾವು ಭಾರತೀಯರು, ಗೋವನ್ನು 'ಗೋಮಾತೆ' ಎಂದು ಕರೆಯುತ್ತೇವೆ, ಹಿಂದೂಗಳು ಅದನ್ನು ಪೂಜಿಸುತ್ತಾರೆ. ಹಾಗಾಗಿ ಮುಸ್ಲಿಮರು ಗೋವುಗಳನ್ನು ಗೌರವಿಸಬೇಕು. ಇಸ್ಲಾಮಿಕ್ ಸಂಪ್ರದಾಯಗಳು ಗೋಮಾಂಸ ಸೇವನೆಯನ್ನು ಉತ್ತೇಜಿಸುವುದಿಲ್ಲ" ಎಂದು ಅವರು ಸ್ಪಷ್ಟಪಡಿಸಿದರು. ಕುರ್ಬಾನಿ ಸಂದರ್ಭದಲ್ಲೂ ಗೋವನ್ನು ಬಲಿಕೊಡಬಾರದು ಎಂದು ಅವರು ಮನವಿ ಮಾಡಿದರು.

ಗೋವಿನ ಹಾಲು ಪ್ರಯೋಜನಕಾರಿ ಮತ್ತು ಔಷಧೀಯ ಗುಣಗಳ ಆಗರವಾಗಿದೆ ಎಂದು ಅನ್ಸಾರಿ ಉಲ್ಲೇಖಿಸಿದರು. "ನಮ್ಮ ಇಸ್ಲಾಂ ಧರ್ಮವು ಹಸುವಿನ ಮಾಂಸ ತಿನ್ನುವುದನ್ನು ನಿಷೇಧಿಸಿದೆ. ಆದಾಗ್ಯೂ, ಕೆಲವರು ನಮ್ಮ ದೇಶದಲ್ಲಿ ಮುಸ್ಲಿಮರನ್ನು ಕೆಣಕಲು ಈ ವಿಷಯವನ್ನು ಬಳಸಿಕೊಳ್ಳುತ್ತಿದ್ದಾರೆ" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ, ಮುಸ್ಲಿಮರೆಲ್ಲರೂ ಎಚ್ಚೆತ್ತುಕೊಂಡು ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಇಕ್ಬಾಲ್ ಅನ್ಸಾರಿ ಅವರ ಈ ಹೇಳಿಕೆಯು, ಕೋಲ್ಕತ್ತಾದ ನಖೋಡಾ ಮಸೀದಿಯ ಇಮಾಮ್ ಮೌಲಾನಾ ಮೊಹಮ್ಮದ್ ಶಫೀಕ್ ಖಾಸ್ಮಿ ಅವರು ಇದೇ ರೀತಿಯ ಮನವಿಯನ್ನು ಮಾಡಿದ ಒಂದು ದಿನದ ನಂತರ ಬಂದಿದೆ.

Edited By :
PublicNext

PublicNext

21/05/2026 06:05 pm

Cinque Terre

41.34 K

Cinque Terre

8

ಸಂಬಂಧಿತ ಸುದ್ದಿ