ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ ರೈತರಿಗೆ ಬೆಳೆ ವಿಮಾ ವಂಚನೆ: ಬೃಹತ್ ಪ್ರತಿಭಟನೆಗೆ ಸಿದ್ಧತೆ!

ಚಳ್ಳಕೆರೆ : ತಾಲೂಕಿನಲ್ಲಿ ಕಳೆದ ವರ್ಷ ಶೇಂಗಾ ಬೆಳೆ ಸಂಪೂರ್ಣ ಹಾನಿಗೊಳಗಾಗಿದ್ದರೂ, ವಿಮಾ ಕಂಪನಿಗಳು ರೈತರಿಗೆ ಸೂಕ್ತ ಪರಿಹಾರ ನೀಡದೆ ಮೋಸ ಮಾಡುತ್ತಿವೆ ಎಂದು ಆರೋಪಿಸಿ, ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಕುರಿತು ಇಂದು ಚಳ್ಳಕೆರೆ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ರಾಜ್ಯ ರೈತ ಸಂಘ ಹಸಿರು ಸೇನೆಯ ರೆಡ್ಡಿಹಳ್ಳಿ ವೀರಣ್ಣ, ಬೇಡ ರೆಡ್ಡಿಹಳ್ಳಿ ಬಸವರಡ್ಡಿ ಹಾಗೂ ಕೆ.ಪಿ. ಬೂತಯ್ಯ ಸೇರಿದಂತೆ ನಾಲ್ಕು ಬಣಗಳ ಪ್ರಮುಖ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಬೆಳೆ ವಿಮಾ ಕಂಪನಿಗಳು ಮತ್ತು ಸರ್ಕಾರಗಳ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಕುರಿತು ಈ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.** ವಿಮಾ ಕಂಪನಿಗಳ ವಂಚನೆ ವಿರುದ್ಧದ ಹೋರಾಟದ ರೂಪುರೇಷೆಗಳನ್ನು ರೂಪಿಸಲು ಹಲವು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

Edited By : PublicNext Desk
Kshetra Samachara

Kshetra Samachara

21/05/2026 09:13 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ