ವಿಜಯಪುರ: ಬೀಸಿಲಿನಿಂದ ಬೇಸತ್ತಿದ್ದ ವಿಜಯಪುರ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ನಿನ್ನೆ ಸಂಜೆಯಿಂದ ಬೆಳಗಿನವರೆಗೂ ಬಿರುಸಿನ ಮಳೆ ಸುರಿದಿದೆ. ಬಬಲೇಶ್ವರ ತಾಲೂಕು, ತಿಕೋಟಾ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಗಾಳಿ ಸಹಿತ ಮಳೆ ಸುರಿದಿದ್ದು, ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಜಿಲ್ಲೆಯಲ್ಲಿ ಇಂದು ಕೂಡಾ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಪರಿಣಾಮ ಮುಂಗಾರು ಬಿತ್ತನೆಯ ಚಟುವಟಿಕೆಗಳು ಆರಂಭವಾಗಲಿವೆ.
PublicNext
24/05/2026 01:58 pm
LOADING...