ಶಿರಸಿ : ಭಟ್ಕಳದ ಸಮೀಪ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಸಂದರ್ಭದಲ್ಲಿ, ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕ ಸಂಗತಿಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ಆಸರೆಯಾಗಲು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಸೂಕ್ತ ಮತ್ತು ಗರಿಷ್ಠ ಪ್ರಮಾಣದ ಆರ್ಥಿಕ ಪರಿಹಾರವನ್ನು ಒದಗಿಸಿಕೊಡಲು ನಾನು ಕ್ಷೇತ್ರದ ಸಂಸದನಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದ್ದೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
PublicNext
24/05/2026 08:28 pm
LOADING...