ಹುಬ್ಬಳ್ಳಿ: ಉಣಕಲ್ಲದ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಜರುಗಿದ 2055ನೇ ಮದ್ಯವರ್ಜನ ಶಿಬಿರದ ನಿಮಿತ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕರಾದ ಡಾ. ರಮೇಶ ಮಹಾದೇವಪ್ಪನವರ ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ, ಉತ್ತಮ ಬದುಕಿನತ್ತ ಹೆಜ್ಜೆ ಇಡಲು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ, ರಾಜಣ್ಣ ಕೊರವಿ, ರಮೇಶ್ ಕಾಂಬಳೆ, ನಾಯಕ್ ಸರ್, ಸೋಮಲಿಂಗ ಸರ್, ಪಿರಾಜ ಕಂಡೇಕರ್, ಮಾರುತಿ ಸೇಟ್ ಸೇರಿದಂತೆ ಹಲವಾರು ಗಣ್ಯರು ಹಾಗೂ ಮಹಿಳಾ ತಂಡದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/05/2026 08:47 pm
LOADING...