ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಸಿಎಂ ಅವರನ್ನು ಕೇಳಿ ಶೀಘ್ರದಲ್ಲೇ ಚಾಲನೆ ನೀಡುತ್ತೇವೆ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದರು
ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸವದತ್ತಿ ಯಲ್ಲಮ್ಮ ಪ್ರಾಧಿಕಾರಕ್ಕೆ 215 ಕೋಟಿ ಅನುದಾನ ಬಿಡುಗಡೆಯಾಗಿ ಟೆಂಡರ್ ಕೂಡ ಆಗಿದೆ. ಶಂಕು ಸ್ಥಾಪನೆ ಮಾಡಲು ಸಿಎಂ ಅವರನ್ನು ಕೇಳಿ ದಿನಾಂಕ ನಿಗದಿ ಮಾಡಲು ಡಿಸಿ ಜೊತೆ ಸಭೆ ಮಾಡಲಾಗಿದೆ. ಶನಿವಾರ ಅಥವಾ ಸೋಮವಾರ ಬೆಂಗಳೂರಿಗೆ ಹೋಗಿ ಸಿಎಂ ಅವರ ಹತ್ತಿರ ದಿನಾಂಕ ನಿಗದಿ ಮಾಡಲಿದ್ದೇವೆ.
ದೇವಸ್ಥಾನದ ಅಭಿವೃದ್ಧಿ ಹೇಗೆ ಮಾಡಬೇಕು ಎಂದು ಮಾಸ್ಟರ್ ಪ್ಲಾನ್ ಕೂಡಾ ಸಿದ್ಧ ಆಗಿದೆ. 215 ಕೋಟಿ ಪೈಕಿ 180 ಕೋಟಿಯ ಟೆಂಡರ್ ಆಗಿದ್ದು, ಉಳಿದ 30 ಕೋಟಿಯಲ್ಲಿ ಏನು ಮಾಡಬೇಕು ಎಂದು ಡಿಪಿಆರ್ ಸಿದ್ಧವಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದರು.
PublicNext
27/05/2026 10:33 pm
LOADING...