ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ರಾಜೀನಾಮೆ...! - ಕಾರಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನಿರ್ಧಾರವು ಕರ್ನಾಟಕ ರಾಜಕಾರಣದಲ್ಲಿ ತೀವ್ರ ಭಾವನಾತ್ಮಕ ಅಲೆಗಳನ್ನು ಸೃಷ್ಟಿಸಿದೆ. ಈ ಬೆಳವಣಿಗೆಯ ನಡುವೆ, ಸಿಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಯಲ್ಲಿ ನಡೆದ ಉಪಹಾರ ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿಯುತ್ತಿರುವುದನ್ನು ನೆನೆದು, 'ಕಾವೇರಿ' ನಿವಾಸದ ಆವರಣದಿಂದ ತಮ್ಮ ಕಾರಿನಲ್ಲಿ ಹೊರಡುತ್ತಿದ್ದ ವೇಳೆ ಸಂತೋಷ್ ಲಾಡ್ ಅತ್ಯಂತ ಭಾವುಕರಾಗಿ ಕಂಡುಬಂದರು. ಕಾರಿನಲ್ಲೇ ಬಿಕ್ಕಿ ಬಿಕ್ಕಿ ಅತ್ತ ಅವರ ದೃಶ್ಯಗಳು ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿ, ಅವರ ಮನಸ್ಸಿನ ನೋವನ್ನು ಅನಾವರಣಗೊಳಿಸಿವೆ.

ಸಿಎಂ ಜೊತೆಗಿನ ಆಪ್ತ ಸಂಬಂಧ

ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು ಹಾಗೂ ಅತ್ಯಂತ ಆತ್ಮೀಯ ಸಚಿವರಾಗಿದ್ದಾರೆ. ಸಿದ್ದರಾಮಯ್ಯ ಅವರ ಆಡಳಿತ ವೈಖರಿ ಮತ್ತು ಅವರ ಮೇಲಿನ ವೈಯಕ್ತಿಕ ಗೌರವದಿಂದಾಗಿ, ಲಾಡ್ ಅವರು ಸದಾ ಮುಖ್ಯಮಂತ್ರಿಯ ನೆರಳಿನಂತೆ ಜೊತೆಗಿದ್ದವರು. ಈ ಆಳವಾದ ಸಂಬಂಧವೇ ಅವರ ದುಃಖಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

Edited By : Vijay Kumar
PublicNext

PublicNext

28/05/2026 01:10 pm

Cinque Terre

51.44 K

Cinque Terre

17