ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ಬೆನ್ನಲ್ಲೇ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ.

ನಮ್ಮ ಪಕ್ಷ ನನ್ನನ್ನೂ ಪರಿಗಣಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾನೂ ಸಚಿವ ಸ್ಥಾನದ ರೇಸ್ ನ ಲ್ಲಿದ್ದೀನಿ ಎಂದು ಹೇಳುವ ಮೂಲಕ ನಾಯಕರ ಭೇಟಿಗೆ ಬೆಂಗಳೂರಿಗೆ ತೆರಳಿದ್ದಾರೆ. ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿರುವ ಅವರು,

ಈ ಕುರಿತು ಈಗಿನ ಸಿಎಂ, ಹೈ ಕಮಾಂಡ್ ನಿರ್ಧಾರ ಮಾಡ್ತಾರೆ.

ಮಾಧ್ಯಮಗಳನ್ನು ನೋಡಿ ನಾವು ಸಾಕಷ್ಟು ತಿಳಿದುಕೊಂಡಿದ್ದೀವಿ,

ಸಿಎಂ ಬದಲಾವಣೆ ವಿಚಾರದ ಕುರಿತು ನಾನು ಹೇಳೋದು ಬೇಕಿಲ್ಲ ಎಂದರು.

Edited By :
PublicNext

PublicNext

28/05/2026 05:26 pm

Cinque Terre

5.96 K

Cinque Terre

0