ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗ ಭದ್ರಾವತಿ ತೀರ್ಥಹಳ್ಳಿ ಹೊಸನಗರ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ 12ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮ ಮರಳು ಗಣಿಗಾರಿಕೆ ಪತ್ತೆ ಹಚ್ಚಿದೆ.

ದಾಳಿಯ ವೇಳೆ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು ನೂರಾರು ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಇಲ್ಲಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಕಚೇರಿಯ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಇಂದು ಅಕ್ರಮ ಮರಳುಗಾರಿಕೆ ಸಂಬಂಧ ಶಿವಮೊಗ್ಗ ಭದ್ರಾವತಿ ತೀರ್ಥಹಳ್ಳಿ ಸಾಗರ ತುಂಗಾ, ಭದ್ರಾ, ಶರಾವತಿ, ನದಿ ತೀರ ಹಲವಾರು ಕಡೆ ಲೋಕಾಯುಕ್ತ ಅಧಿಕಾರಿಗಳು ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳು ಲೋಕಾಯುಕ್ತ ದಾಳಿ ನಡೆಸಿದ್ದಾರೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ಹಾವೇರಿ ಜಿಲ್ಲೆಯ ಲೋಕಾಯುಕ್ತ ಪೊಲೀಸರ 15 ತಂಡಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಗ್ರಾಮಾಂತರ ಶಿವಮೊಗ್ಗದ ಹೊಳಲೂರು ಮತ್ತು ಇತರೆಡೆ ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ನೇತೃತ್ವದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿದ್ದ ಎಂಬತ್ತಕ್ಕೂ ಹೆಚ್ಚು ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಯಿತು.

Edited By :
Kshetra Samachara

Kshetra Samachara

30/05/2026 06:59 pm

Cinque Terre

2.08 K

Cinque Terre

0