ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರಾವಳಿಯ ಅಭಿವೃದ್ಧಿಯ ಧ್ವನಿಗೆ ಮತ್ತೊಂದು ಶಕ್ತಿ - ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ

ಭಟ್ಕಳ: ಕರಾವಳಿ ಭಾಗದ ಅಭಿವೃದ್ಧಿ, ಮೀನುಗಾರರ ಹಕ್ಕುಗಳ ರಕ್ಷಣೆ ಹಾಗೂ ಜನಪರ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಹಿರಿಯ ನಾಯಕ ಹಾಗೂ ಸಚಿವ ಮಾಂಕಾಳ ಎಸ್. ವೈದ್ಯರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಬಹುತೇಕ ಖಚಿತ ವಾಗಿದೆ.

ಈ ಬೆಳವಣಿಗೆ ಕರಾವಳಿ ಭಾಗದ ಜನರಲ್ಲಿ ಸಂತಸ ಮೂಡಿಸಿದ್ದು, ಮೀನುಗಾರ ಸಮುದಾಯದಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ.

ವರ್ಷಗಳಿಂದ ಮೀನುಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅವರ ಪರವಾಗಿ ಧ್ವನಿಯಾಗಿ ಕಾರ್ಯನಿರ್ವಹಿಸಿರುವ ಮಾಂಕಾಳ ವೈದ್ಯರು ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಾ ಬಂದಿದ್ದಾರೆ. ಮೀನುಗಾರಿಕಾ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳ ಸುಧಾರಣೆ, ಮೀನುಗಾರರಿಗೆ ಅಗತ್ಯ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರಾವಳಿ ಭಾಗದ ಜನಜೀವನದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಾಂಕಾಳ ವೈದ್ಯರು ಮೀನುಗಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ಬಾರಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಅವರ ಕಾರ್ಯಶೈಲಿ ಜನಮೆಚ್ಚುಗೆಗೆ ಪಾತ್ರವಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಮೂಲಕ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದಾರೆ.

ರಾಜ್ಯ ಸಚಿವ ಸಂಪುಟದಲ್ಲಿ ಇದೀಗ ಮತ್ತೊಂದು ಜವಾಬ್ದಾರಿ ನೀಡಿರುವುದು ಕರಾವಳಿ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ. ಇದರೊಂದಿಗೆ ಕರಾವಳಿ ಭಾಗದ ಮೂಲಸೌಕರ್ಯ ಅಭಿವೃದ್ಧಿ, ಮೀನುಗಾರರ ಬದುಕಿನ ಸುಧಾರಣೆ ಮತ್ತು ಜನಪರ ಯೋಜನೆಗಳ ಜಾರಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ ದೊರೆತ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು, ಮುಖಂಡರು, ಮೀನುಗಾರ ಸಮುದಾಯದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕರಾವಳಿಯ ಅಭಿವೃದ್ಧಿಗೆ ಅವರ ನೇತೃತ್ವ ಇನ್ನಷ್ಟು ಬಲ ತುಂಬಲಿದ್ದು, ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳು ಜಾರಿಗೆ ಬರುವ ನಿರೀಕ್ಷೆ ವ್ಯಕ್ತವಾಗಿದೆ.

Edited By : PublicNext Desk
Kshetra Samachara

Kshetra Samachara

01/06/2026 08:52 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ