ಬೆಳಗಾವಿ: ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ಬೆಳಗಾವಿಯ ರೈಲ್ವೆ ನಿಲ್ದಾಣದ ಬಳಿ ಇರುವ ಮುರಾದಲಿ ಶಾ ದರ್ಗಾ. ಮುಸ್ಲಿಂ ಬಾಂಧವರು ಹಾಗೂ ಕಾಂಗ್ರೆಸ್ ಕಾರ್ಯಕರ್ತೆ ಆಯೇಶಾ ಸನದಿ ನೇತೃತ್ವದಲ್ಲಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ.
ಮುರಾದಲಿ ಶಾಗೆ ಹೂವಿನ ಹೊದಿಕೆ ಅರ್ಪಿಸಿ, ಕೈಯಲ್ಲಿ ಭಿತ್ತಿಪತ್ರ ಹಿಡಿದು ಜೈಕಾರ ಕೂಗಿ, ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಹಾಗೂ ಡಿಸಿಎಂ ಹುದ್ದೆ ಸಿಗಲೆಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ.
PublicNext
02/06/2026 02:54 pm
LOADING...