ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲ್ಕತ್ತಾ: ಗಡಿ ದಾಟಿ ಅಕ್ರಮವಾಗಿ ಭಾರತ ಪ್ರವೇಶ : ಬಂಗಾಳದಲ್ಲಿ 18 ಬಾಂಗ್ಲಾದೇಶಿಗರ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಆರು ಮಕ್ಕಳು ಸೇರಿ 18 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಂಗಳವಾರ ರಾತ್ರಿ ದಾಳಿ ನಡೆಸಿದ ಪೊಲೀಸರು, ಹಲವು ವರ್ಷಗಳಿಂದ ಅಕ್ರಮವಾಗಿ ವಾಸಿಸುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಬಂಧಿತರೆಲ್ಲರೂ ಬಾಂಗ್ಲಾದೇಶದ ನಿವಾಸಿಗಳಾಗಿದ್ದು, ಏಜೆಂಟರ ನೆರವಿನಿಂದ ಗಡಿ ಬೇಲಿ ದಾಟಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಕೆಲವರು ಸ್ಥಳೀಯ ಇಟ್ಟಿಗೆ ಕುಲುಮೆಗಳಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಮೂರರಿಂದ ಮೂರೂವರೆ ವರ್ಷಗಳಿಂದ ಈ ಪ್ರದೇಶದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಇದೀಗ ಅವರ ಗುರುತಿನ ದಾಖಲೆಗಳು ಮತ್ತು ಹಿನ್ನೆಲೆಗಳ ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ, ದಾಖಲೆರಹಿತ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡುವ ಪ್ರಕ್ರಿಯೆಗೆ ವೇಗ ನೀಡಲು ರಾಜ್ಯ ಸರ್ಕಾರ ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಕೇಂದ್ರ ಸ್ಥಾಪಿಸುವಂತೆ ನಿರ್ದೇಶಿಸಿದೆ. ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಂಧಿತರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು.

ಅಕ್ರಮ ವಲಸೆ ತಡೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಈ ಕಾರ್ಯಾಚರಣೆ ಗಡಿ ಭದ್ರತೆ ಮತ್ತು ರಾಷ್ಟ್ರೀಯ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ.

Edited By :
PublicNext

PublicNext

03/06/2026 04:46 pm

Cinque Terre

5.52 K

Cinque Terre

0

ಸಂಬಂಧಿತ ಸುದ್ದಿ