ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿ.ಕೆ. ಶಿವಕುಮಾರ್ ನೂತನ ಸಿಎಂ; ಅಭಿಮಾನಿಗಳಿಂದ ಸಂಭ್ರಮಾಚರಣೆ

ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ನಗರದ ಕಿನ್ನಿಮೂಲ್ಕಿ ಪ್ರದೇಶದಲ್ಲಿ ಬುಧವಾರ ಸಂಜೆ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

ರಾಜ್ಯಕ್ಕೆ ಹೊಸ ನಾಯಕತ್ವ ದೊರೆತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಾಗೂ ಜನಪರ ಆಡಳಿತದ ನಿರೀಕ್ಷೆಯನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.

Edited By :
PublicNext

PublicNext

03/06/2026 07:07 pm

Cinque Terre

9.76 K

Cinque Terre

1

ಸಂಬಂಧಿತ ಸುದ್ದಿ