ಶಿಗ್ಗಾವಿ: ತೋಟಗಾರಿಕೆ ಇಲಾಖೆಯಲ್ಲಿ 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಪ್ಲಾಸ್ಟಿಕ್ ಮಲ್ಟಿಂಗ್, ಎರೆಹುಳು ಘಟಕ, ಜೇನು ಸಾಕಾಣಿಕೆ, ಸಣ್ಣ ಟ್ರ್ಯಾಕ್ಟರ್, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕ ಹಾಗೂ ವಿವಿಧ ಸೌಲಭ್ಯಗಳಿಗೆ ತಾಲೂಕಿನ ರೈತರಿಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಶಿಗ್ಗಾವಿ ತಾಲೂಕಿನ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಈ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ ಕಿಶೋರ್ ನಾಯಕ್ ತಿಳಿಸಿದ್ದಾರೆ.
PublicNext
07/06/2026 07:50 am
LOADING...