ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಕಾವು : ಮಧ್ಯಪ್ರದೇಶ ಶಾಸಕರು ಬೆಂಗಳೂರಿಗೆ!

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಕಾಂಗ್ರೆಸ್‌ನ 63 ಶಾಸಕರು ಸೇರಿದಂತೆ ಒಟ್ಟು 75 ಮಂದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಭೋಪಾಲ್‌ನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿದ ಈ ನಿಯೋಗ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ವಿಮಾನ ನಿಲ್ದಾಣದಿಂದ ಪೊಲೀಸ್ ಭದ್ರತೆಯಲ್ಲಿ ವಂಡರ್‌ಲಾ ರೆಸಾರ್ಟ್‌ಗೆ ತೆರಳಲಿರುವ ಶಾಸಕರು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಶಾಸಕರನ್ನು ಬೆಂಗಳೂರಿಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.

Edited By :
PublicNext

PublicNext

10/06/2026 08:34 am

Cinque Terre

7.78 K

Cinque Terre

0

ಸಂಬಂಧಿತ ಸುದ್ದಿ