ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ವಿಜಯ್ ಜೋಸೆಫ್ ತಂಗಿದ್ದ ದೆಹಲಿಯ ತಮಿಳುನಾಡು ಭವನದಲ್ಲಿ ಬೆಂಕಿ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಂಗಿದ್ದ ದಿಲ್ಲಿಯ ಕೌಟಿಲ್ಯ ಮಾರ್ಗದಲ್ಲಿರುವ 'ತಮಿಳುನಾಡು ಭವನ'ದಲ್ಲಿ ಸಣ್ಣ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿ ವಿಜಯ್ ನೀತಿ ಆಯೋಗದ ಸಭೆಗೆ ತೆರಳಲು ಅತಿಥಿಗೃಹದಿಂದ ನಿರ್ಗಮಿಸಿದ ಕೆಲವೇ ಕ್ಷಣಗಳಲ್ಲಿ ಈ ಘಟನೆ ಸಂಭವಿಸಿದ್ದು, ಚಾಣಕ್ಯಪುರಿ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತಮಿಳುನಾಡು ಭವನದಿಂದ ಮುಖ್ಯಮಂತ್ರಿ ವಿಜಯ್ ನಿರ್ಗಮಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಅನಿಲ ಸೋರಿಕೆಯಿಂದ ಈ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ತಕ್ಷಣವೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.

Edited By : Nagaraj Tulugeri
PublicNext

PublicNext

11/06/2026 04:48 pm

Cinque Terre

2.36 K

Cinque Terre

0

ಸಂಬಂಧಿತ ಸುದ್ದಿ