ಶಿಮ್ಲಾ: ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಹುಚ್ಚು ಸಾಹಸಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪ್ರಕೃತಿ ಸೌಂದರ್ಯ ಸವಿಯಲು ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆಯೊಂದು ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮಣಿಕರನ್ ಬಳಿ ಹರಿಯುವ ಪಾರ್ವತಿ ನದಿಯ ದಂಡೆಯಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ, ನೀರಿನ ಪ್ರಬಲ ಹರಿವಿಗೆ ಸಿಲುಕಿ ಕೊಚ್ಚಿಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ಪಾರ್ವತಿ ನದಿಯ ದಂಡೆಯಲ್ಲಿ ಫೋಟೊ ತೆಗೆಯುವಾಗ ಪ್ರಬಲ ನೀರಿನ ಹರಿವಿಗೆ ಸಿಲುಕಿದ ಮೂವರು ಪ್ರವಾಸಿಗರು, ಸ್ಥಳೀಯರ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.** ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪಂಜಾಬ್ನಿಂದ ಆಗಮಿಸಿದ್ದ ಒಂದೇ ಕುಟುಂಬದ ಮೂವರು, ಪೂಜ್ಯ ಮಣಿಕರಣ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ ನಂತರ ಪಾರ್ವತಿ ನದಿಯ ದಡದಲ್ಲಿ ಫೋಟೊ ತೆಗೆಯಲು ತೆರಳಿದ್ದರು. ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಸಮತೋಲನ ಕಳೆದುಕೊಂಡು ವೇಗವಾಗಿ ಹರಿಯುತ್ತಿದ್ದ ನೀರಿಗೆ ಬಿದ್ದಿದ್ದಾರೆ. ಪ್ರಬಲ ಹರಿವಿನಿಂದಾಗಿ ಅವರು ಕ್ಷಣಾರ್ಧದಲ್ಲಿ ಕೊಚ್ಚಿಕೊಂಡು ಹೋಗತೊಡಗಿದ್ದಾರೆ.
ಪ್ರವಾಸಿಗರು ನದಿಯಲ್ಲಿ ಕೊಚ್ಚಿಹೋಗುತ್ತಿರುವುದನ್ನು ಕಂಡ ತಕ್ಷಣ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಜೋರಾಗಿ ಕಿರುಚಿ ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ನಿವಾಸಿಗಳು ತಮ್ಮ ಸಮಯಪ್ರಜ್ಞೆ ಬಳಸಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಎಳೆದಿದ್ದಾರೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ತಂಡಗಳು ಸಹ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದು, ಮೂವರು ಪ್ರವಾಸಿಗರನ್ನು ನೀರಿನಿಂದ ಯಶಸ್ವಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
PublicNext
11/06/2026 05:56 pm