ಹಾಸನ: ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನದ ಬೇಡಿಕೆ ದಿನೇ ದಿನೇ ಹೆಚ್ಚಾಗ್ತಿದೆ. ಮುಸ್ಲಿಂ ಸಮುದಾಯದ ಜಮೀರ್ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ ಹಾಸನ ನಗರದ 80 ಅಡಿ ರಿಂಗ್ ರಸ್ತೆಯಲ್ಲಿ ನೂರಾರು ಜಮೀರ್ ಅಭಿಮಾನಿಗಳು ಪಂಜಿನ ಮೆರವಣಿಗೆ ನಡೆಸಿ ಸಚಿವ ಸ್ಥಾನಕ್ಕೆ ಆಗ್ರಹಿಸಿದ್ದಾರೆ. ಎಪಿಜೆ ಅಬ್ದುಲ್ ಕಲಾಂ ಚಾರಿಟಬಲ್ ಟ್ರಸ್ಟ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪಂಜಿನ ಮೆರವಣಿಗೆ ನಡೆಸಲಾಗಿದೆ. ಜಮೀರ್ಗೆ ಸೂಕ್ತ ಸ್ಥಾನಮಾನ ನೀಡದೆ ಇದ್ದರೆ ಹೋರಾಟ ಹೆಚ್ಚಿಸುತ್ತೇವೆ ಎಂದು ಎಚ್ಚರಿಸಿರೋ ಪ್ರತಿಭಟನಾಕಾರುಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
PublicNext
12/06/2026 12:53 pm
LOADING...