ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಗಳ ಬಿಡಿಸಲು ಬಂದ ಕಾನ್ಸ್‌ಟೇಬಲ್‌ಗೇ ರಕ್ತ ಬರುವಂತೆ ಅಟ್ಟಾಡಿಸಿ ಹೊಡೆದ ಪುಂಡರು!

ಗದಗ: ಗದಗ ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ಪೊಲೀಸ್ ಕಾನ್ಸ್‌ಟೇಬಲ್ ಮೇಲೆಯೇ ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಗದಗ ನಗರದ ದೋಬಿ ಘಾಟ್ ಬಳಿ ಗುರುವಾರ ರಾತ್ರಿ ನಡೆದಿದೆ.

​ಶಿರಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಅಶೋಕ್ ಪಾಟೀಲ್ ಹಲ್ಲೆಗೊಳಗಾದ ಪೊಲೀಸ್ ಕಾನ್ಸ್‌ಟೇಬಲ್. ಇವರು ಕರ್ತವ್ಯ ಮುಗಿಸಿ ನಗರದಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದಾಗ, ದೋಬಿ ಘಾಟ್ ಬಳಿ ಯುವಕರ ಗುಂಪೊಂದು ಗಲಾಟೆ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ತಕ್ಷಣವೇ ಜಗಳ ಬಿಡಿಸಲು ಅಶೋಕ್ ಪಾಟೀಲ್ ಮುಂದಾಗಿದ್ದಾರೆ.

​ಆದರೆ, ಕಾನೂನಿನ ಭಯವೇ ಇಲ್ಲದಂತೆ ವರ್ತಿಸಿದ ಆ ಪುಂಡರ ಗುಂಪು, ಜಗಳ ಬಿಡಿಸಲು ಬಂದ ಕಾನ್ಸ್‌ಟೇಬಲ್ ಮೇಲೆಯೇ ಮನಬಂದಂತೆ ಮುಗಿಬಿದ್ದಿದೆ. ತೀವ್ರವಾಗಿ ಹಲ್ಲೆ ನಡೆಸಿ, ರಕ್ತ ಬರುವಂತೆ ಅಟ್ಟಾಡಿಸಿ ಹೊಡೆದಿದ್ದಾರೆ.

​ಸದ್ಯ ತೀವ್ರವಾಗಿ ಗಾಯಗೊಂಡಿರುವ ಪೊಲೀಸ್ ಕಾನ್ಸ್‌ಟೇಬಲ್ ಅಶೋಕ್ ಪಾಟೀಲ್ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದೌರ್ಜನ್ಯದ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪುಂಡರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Edited By : Shivu K
PublicNext

PublicNext

12/06/2026 04:31 pm

Cinque Terre

16.68 K

Cinque Terre

0