ಬಾಗಲಕೋಟೆ: ಹೆಸ್ಕಾಂ ಸಂಸ್ಥೆಯನ್ನು ಖಾಸಗೀಕರಣ ಮಾಡಲು ನಿರ್ಧರಿಸಿರುವ ಸರ್ಕಾರದ ಕ್ರಮ ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ಹೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಧರಣಿ ಕೂತ ಬಾಗಲಕೋಟೆ ಜಿಲ್ಲಾ ರೈತ ಸಂಘಟನೆಗಳ ಮುಖಂಡರು ಹೆಸ್ಕಾಂ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿದರು. ಸರ್ಕಾರ ಯಾವುದೇ ಕಾರಣಕ್ಕೂ ಹೆಸ್ಕಾಂ ಸಂಸ್ಥೆಯನ್ನು ಖಾಸಗಿ ಸಂಸ್ಥೆಗೆ ನೀಡಬಾರದು. ಇದರಿಂದ ರೈತರಿಗೆ ಅತೀ ಹೆಚ್ಚು ಅನಾನುಕೂಲ ಉಂಟಾಗಲಿದೆ. ಹೀಗಾಗಿ ಸರ್ಕಾರ ಹೆಸ್ಕಾಂ ಖಾಸಗೀಕರಣ ಚಿಂತನೆಯನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.
PublicNext
12/06/2026 10:43 pm
LOADING...