ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಮಕ್ಕಳ ಕಲ್ಯಾಣಕ್ಕೆ ಸರ್ಕಾರದ ಮಾಸ್ಟರ್ ಪ್ಲಾನ್ - ಸಿಎಂ ಸಭೆಯಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ಖಾದರ್!

ಬೆಂಗಳೂರು : ಶಾಲಾ ಶೈಕ್ಷಣಿಕ ವರ್ಷ 2026–27ರ ಆರಂಭ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಮಹತ್ವದ ಸಭೆ. ಶಾಲಾ ಶೈಕ್ಷಣಿಕ ವರ್ಷ 2026–27ರ ಯಶಸ್ವಿ ಆರಂಭದ ಹಿನ್ನೆಲೆಯಲ್ಲಿ, ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಮಹತ್ವದ ಉನ್ನತ ಮಟ್ಟದ ಸಭೆ ಜರುಗಿತು. ಈ ಪ್ರಮುಖ ಸಭೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಭಾಗವಹಿಸಿ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಶಾಲಾ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳ ಹೊಸ ದಾಖಲಾತಿ ಪ್ರಕ್ರಿಯೆ, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಉಸ್ತುವಾರಿ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಗ್ರಾಮೀಣ ಮತ್ತು ನಗರ ಪ್ರದೇಶದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಟಿಕ ಆಹಾರ ತಲುಪಿಸುವ ನಿಟ್ಟಿನಲ್ಲಿ ಇಲಾಖೆಗಳ ಸಮನ್ವಯತೆಗೆ ಒತ್ತು ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಸಭೆಗೆ ಅಗತ್ಯ ಮಾಹಿತಿ ಹಾಗೂ ಪ್ರಗತಿ ವರದಿಗಳನ್ನು ಸಲ್ಲಿಸಿದರು. ನೂತನ ಶೈಕ್ಷಣಿಕ ವರ್ಷವನ್ನು ಅತ್ಯಂತ ವ್ಯವಸ್ಥಿತವಾಗಿ ಆರಂಭಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದೆ ಎಂದು ಸಭೆಯ ಬಳಿಕ ತಿಳಿಸಲಾಯಿತು.

Edited By : Vijay Kumar
PublicNext

PublicNext

13/06/2026 02:42 pm

Cinque Terre

4.49 K

Cinque Terre

0

ಸಂಬಂಧಿತ ಸುದ್ದಿ