ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಜಾನೆ 3ರವರೆಗೂ ಸಭೆ - ಸಚಿವ ಖಾದರ್ ಕಾರ್ಯವೈಖರಿಗೆ ನಾಡೇ ಅಚ್ಚರಿ, ಆರೋಗ್ಯ ಕ್ಷೇತ್ರಕ್ಕೆ ಹೊಸ ದಿಕ್ಕು!

ಸಕಲೇಶಪುರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ತಡರಾತ್ರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಚ್ಚರಿ ಮೂಡಿಸಿದ್ದಾರೆ.

ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಮುಂಜಾನೆ 3 ಗಂಟೆಯವರೆಗೂ ನಡೆದು, ಸಚಿವರ ಕಾರ್ಯವೈಖರಿ ಎಲ್ಲರ ಗಮನ ಸೆಳೆದಿದೆ. ಜೂನ್ 5ರಂದು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಖಾದರ್, ಇದೀಗ ಸಕಲೇಶಪುರದಲ್ಲಿಯೂ ಮಧ್ಯರಾತ್ರಿ ಸಭೆ ನಡೆಸಿ ತಮ್ಮ ಕಾರ್ಯದಕ್ಷತೆಯನ್ನು ಪ್ರದರ್ಶಿಸಿದ್ದಾರೆ.

ಈ ಸಭೆಯಲ್ಲಿ ಸ್ಥಳೀಯ ಶಾಸಕ ಸಿಮೆಂಟ್ ಮಂಜು ಮತ್ತು ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಿದ್ದರು.

ಸ್ಥಳೀಯ ಶಾಸಕ ಸಿಮೆಂಟ್ ಮಂಜು ಮಾತನಾಡಿ,ರಾಜ್ಯದ ಎಲ್ಲಾ ಶಾಸಕರಿಗೂ ಸಮಾನ ಅವಕಾಶ ಕಲ್ಪಿಸಿದ ಮೊದಲ ಸಭಾಧ್ಯಕ್ಷರಲ್ಲಿ ಇವರು ಎಂದರೆ ತಪ್ಪಾಗದು ಎಂದು ಪ್ರಶಂಸಿಸಿದರು.

ಸರ್ಕಾರಿ ಆಸ್ಪತ್ರೆಗಳು 'ಕುಟುಂಬದ ಆಸ್ಪತ್ರೆ': ಖಾದರ್

ಸಭೆಯಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ಸರ್ಕಾರಿ ಆಸ್ಪತ್ರೆ ಎಂದರೆ ಅದು ನಮ್ಮ ಕುಟುಂಬದ ಆಸ್ಪತ್ರೆಯೆಂದು ಭಾವಿಸಬೇಕು. ರೋಗಿಗಳು ಬಂದಾಗ ಅವರಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸಲಹೆ ನೀಡಿದರು.

ಹೊರಗುತ್ತಿಗೆ ವೈದ್ಯರಿಗೆ ಶುಭಸುದ್ದಿ ಹಾಗೂ ಹೊಸ ಯೋಜನೆಗಳು

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐದು ವರ್ಷ ಪೂರ್ಣಗೊಳಿಸಿ ಸೇವೆ ಸಲ್ಲಿಸಿದ ಹೊರಗುತ್ತಿಗೆ ವೈದ್ಯರನ್ನು ಶೀಘ್ರದಲ್ಲೇ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಲ್ಲದೆ, ಆಸ್ಪತ್ರೆಗಳಲ್ಲಿನ ಕುಂದುಕೊರತೆಗಳ ಬಗ್ಗೆ ರಾಜ್ಯಾದ್ಯಂತ ನೂತನ ಸಹಾಯವಾಣಿ ಸ್ಥಾಪಿಸುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಹೇಳಿದರು.

ಕಿರಿಯ ವೈದ್ಯರು ಹಾಗೂ ಹೊಸದಾಗಿ ಬರುವ ವೈದ್ಯರಲ್ಲಿ ಆಸ್ಪತ್ರೆಯ ಬಗ್ಗೆ ಸಕಾರಾತ್ಮಕ ಭಾವನೆ ಮೂಡಿಸಿ, ಅವರನ್ನು ಮನವೊಲಿಸಿ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಮಾನಸಿಕವಾಗಿ ಸದೃಢವಾಗಿರುವ ನಿವೃತ್ತ ವೈದ್ಯರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲು ಸರ್ಕಾರದೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಮುದಾಯದ ಸಹಭಾಗಿತ್ವಕ್ಕೆ ಕರೆ

ಸಂಘ-ಸಂಸ್ಥೆಗಳವರು ಆಸ್ಪತ್ರೆಯನ್ನು ತಮ್ಮದೇ ಆಸ್ಪತ್ರೆ ಎಂಬ ಭಾವನೆಯೊಂದಿಗೆ ನೋಡಬೇಕು. ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಮಾನವೀಯ ದೃಷ್ಟಿಕೋನದಿಂದ ವರ್ತಿಸಬೇಕು ಹಾಗೂ ಅವರಿಗೆ ತೊಂದರೆ ಉಂಟಾಗದ ರೀತಿಯಲ್ಲಿ ಸಹಕರಿಸಬೇಕು ಎಂದು ಸಚಿವ ಖಾದರ್ ಮನವಿ ಮಾಡಿದರು.

Edited By : Abhishek Kamoji
PublicNext

PublicNext

14/06/2026 11:19 am

Cinque Terre

15.07 K

Cinque Terre

1

ಸಂಬಂಧಿತ ಸುದ್ದಿ