ಚಾಮರಾಜನಗರ : ತಾಲೂಕಿನ ಬ್ಯಾಡಮೂ ಡ್ಲು ಗ್ರಾಮದಲ್ಲಿ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬ್ಯಾಡಮೂಡ್ಲು ಗ್ರಾಮದ ತಿಂಡಕೆರೆ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ನಾಗರಾಜು ಸೇರಿದಂತೆ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಜೂಜಾಟಕ್ಕಾಗಿ ಪಣವಾಗಿ ಇಟ್ಟಿದ್ದ 4,700 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
Kshetra Samachara
15/06/2026 04:16 pm
LOADING...