ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹಾವೇರಿಯಲ್ಲಿ ಬಂಜಾರ ಸಮುದಾಯ ಪ್ರತಿಭಟನೆ ನಡೆಸಿತು. ಹಾವೇರಿಯ ನಗರದ ಮೈಲಾರ ಮಹಾದೇವಪ್ಪ ವೃತ್ತದಿಂದ ಜೆ.ಎಚ್. ಪಟೀಲ ವೃತ್ತದ ವರೆಗೆ ಪ್ರತಿಭಟನೆ ಜಾಥಾ ನಡೆಸಿತು.
ರಾಜ್ಯದಲ್ಲಿ ಬಂಜಾರ ಸಮುದಾಯದ ಏಕೈಕ ಶಾಸಕರಾದ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಉಪಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಬಂಜಾರ ಸಮುದಾಯದ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರ ಬರಲು ಬಂಜಾರ ಸಮುದಾಯದ ಕೊಡುಗೆ ಇದೆ. ಕಳೆದ ಬಾರಿಗೆ ಸಚಿವ ಸ್ಥಾನದ ಭರವಸೆ ನೀಡಿದರು ಈ ಬಾರಿ ನೀಡಲಿ ಬೇಕು ಅಭಿಮಾನಿಗಳು ಒತ್ತಾಯಿಸಿದರು.
PublicNext
15/06/2026 04:31 pm
LOADING...