ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ರೈತನಿಗೆ ಆಘಾತ: ಬಾವಿಗೆ ಬಿದ್ದು ಪ್ರೀತಿಯ ಎತ್ತುಗಳು ಸಾವು, ಲಕ್ಷಾಂತರ ನಷ್ಟ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೆಗ್ಗಿಹಳ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.

ಸುರೇಶ ಸಿದ್ದಪ್ಪ ಜಂಬಗಿ ಎಂಬ ರೈತರಿಗೆ ಸೇರಿದ ಎರಡು ಎತ್ತುಗಳು ಪಾಳು ಬಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿವೆ. ಮೇಯಲು ಹೋಗಿದ್ದ ಎತ್ತುಗಳು ಬಾವಿಯ ಕಡೆಗೆ ತೆರಳಿದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ತಮ್ಮ ಪ್ರೀತಿಯ ಎತ್ತುಗಳನ್ನು ಕಳೆದುಕೊಂಡ ರೈತ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ದುರಂತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಯಿಂದ ಎತ್ತುಗಳ ಮೃತದೇಹಗಳನ್ನು ಹೊರತೆಗೆದರು. ಈ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

Edited By : Shivu K
PublicNext

PublicNext

15/06/2026 05:05 pm

Cinque Terre

7.66 K

Cinque Terre

0

ಸಂಬಂಧಿತ ಸುದ್ದಿ