ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಬೈಕ್ ಗೆ ಟಿಪ್ಪರ್ ಡಿಕ್ಕಿ.. ಬೈಕ್ ಸವಾರರು ಸ್ಥಳದಲ್ಲೇ ಸಾವು...

ವಿಜಯಪುರ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮರಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ.

ಧರ್ಮಣ್ಣಾ ಹೊಸಮನಿ (41) ಬೀರಪ್ಪ ಪೂಜಾರಿ (25) ಮೃತ ಬೈಕ್ ಸವಾರರಾಗಿದ್ದು ಮೃತರು ಇಂಡಿ ತಾಲೂಕಿನ ಗೋರನಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

15/06/2026 10:40 pm

Cinque Terre

780

Cinque Terre

0

ಸಂಬಂಧಿತ ಸುದ್ದಿ